ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ವತಿಯಿಂದ ಹಿಂದುತ್ವ- ರಾಷ್ಟ್ರೀಯತೆಯ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿಯು ದಿನಾಂಕ 12-01-2023ನೇ ಗುರುವಾರದಂದು ವಿವೇಕಾನಂದ ಕ್ಯಾಂಪಸ್ ನೆಹರುನಗರ, ಪುತ್ತೂರು ಇಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ಅನಂತಕುಮಾರ್ ಹೆಗಡೆ, ಮಾನ್ಯಸಂಸದರು ಉತ್ತರಕನ್ನಡ ಜಿಲ್ಲೆ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಾಜಿ ಸಚಿವರು, ಭಾರತ ಸರ್ಕಾರ ಇವರು ಆಗಮಿಸಿ, ಹಿಂದುತ್ವ ಮತ್ತು ರಾಷ್ಟ್ರೀಯತೆಯ ಬಗ್ಗೆ ಮಾತಾಡಿದರು. ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ ಎಂ ಕೃಷ್ಣ ಭಟ್ ಉಪಸ್ಥಿತರಿದ್ದರು. […]
ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಸಹಯೋಗದೊಂದಿಗಿರುವ ರೇಡಿಯೋ ಪಾಂಚಜನ್ಯ 90.8FM ಇಲ್ಲಿ 09-01-2023 ರಂದು ವಿವೇಕಾನಂದ ಜಯಂತಿಯ ಪ್ರಯುಕ್ತ ವಿವೇಕಾನಂದರ ಚಿಂತನೆಯ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಮ್ಮ ಕಾಲೇಜಿನ ಪ್ರಶಿಕ್ಷಣಾರ್ಥಿಗಳಾದ ಮಂಜುಶ್ರೀ ಕವನವಾಚನ, ಆಶಿತಾ ದೇಶಭಕ್ತಿ ಗೀತೆ ಹಾಗೂ ಬಾಲಕೃಷ್ಣ ವಿವೇಕಾನಂದರ ಬಗ್ಗೆ ಭಾಷಣ ಮಾಡಿದರು. ಇವರೊಂದಿಗೆ ನಮ್ಮ ಕಾಲೇಜಿನ ಸಹಪ್ರಾಧ್ಯಾಪಕಿಯಾದ ಶ್ರೀಮತಿ ವಿದ್ಯಾಲಕ್ಷ್ಮಿ ಇವರು ಉಪಸ್ಥಿತರಿದ್ದರು.
ದಿನಾಂಕ 23-12-2022 ರಂದು ‘ಮೇಧಾ’ ಗಣಕಯಂತ್ರ ಕೊಠಡಿ ಮತ್ತು ತರಗತಿ ಗ್ರಂಥಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಸಿದ್ದೇಶ್ ನಾಗೇಂದ್ರ ಅಧ್ಯಕ್ಷರು, ಎಂ ಎಸ್ ನಾಗೇಂದ್ರ ಸೇವಾ ಪ್ರತಿಷ್ಠಾನ ಬೇಲೂರು, ಹಾಸನ ಜಿಲ್ಲೆ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ವಿದ್ಯೆಯು ಪ್ರತಿಯೊಬ್ಬ ಪ್ರಜೆಯ ಹಕ್ಕು ಆಗಿದೆ ಮತ್ತು ವಿದ್ಯೆ ಯೊಂದಿಗೆ ಸಂಸ್ಕಾರವೂ ಮುಖ್ಯ ಎಂದು ಉದ್ಘಾಟಕರ ಭಾಷಣದಲ್ಲಿ ತಿಳಿಸಿದರು. ಶ್ರೀ. ಎ. ವಿ. ನಾರಾಯಣ ನಿವೃತ್ತ ಪ್ರಾಂಶುಪಾಲರು, ವಿವೇಕಾನಂದ […]
ದಿನಾಂಕ 20-12-2022 ರಂದು ಮಹಿಳೆ ಮತ್ತು ಕಾನೂನು ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಅಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ.ಜಿ.ಶೆಟ್ಟಿ ಇವರು ಮಹಿಳೆ ಮತ್ತು ಕಾನೂನು ಬಗ್ಗೆ ಮಾಹಿತಿ ನೀಡಿ ಮಹಿಳೆ ಮತ್ತು ಕಾನೂನು ತಾಯಿ ಮತ್ತು ಮಗುವಿಗಿರುವ ಸಂಬಂಧ ಎಂದು ತಿಳಿಸಿದರು.ಹಾಗೆಯೇ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನಯನಾ ರೈ ಮತ್ತು ನ್ಯಾಯವಾದಿ ಶ್ರೀಮತಿ ಹೀರಾ ಉದಯ್ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲರಾದ […]
ದಿನಾಂಕ 16-12-2022 ರಂದು ಯಶಸ್ ವಿವೇಕಾನಂದ ಅಧ್ಯಯನ ಕೇಂದ್ರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ದರ್ಶನ್ ಗರ್ತಿಕೆರೆ ಇವರು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು.ಹಾಗೆಯೇ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದ ಶ್ರೀ ಉಮೇಶ್ ನಾಯಕ್ ಇವರು ಸಾಧನೆಗೆ ಪ್ರಯತ್ನ ಮುಖ್ಯವೆಂದು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ ಶೋಭಿತಾ ಸತೀಶ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕ ವೃಂದ ಹಾಗು ಬೋಧಕೇತರ ವೃಂದದವರೂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ […]
ದಿನಾಂಕ 04-11-2022ರಂದು ಕಲಿಕಾ ಚೇತರಿಕೆಯ ಮಾಹಿತಿ ಕಾರ್ಯಾಗಾರ ನಡೆಯಿತು.ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಯುತ ವಿಜಯ್ ಕುಮಾರ್ ನಾಯ್ಕ್ ಸಹಶಿಕ್ಷಕರು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ, ನಳಿನಿ .ಡಿ. ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಹಾಗೂ ಸಿಂಧು ಪಿ.ವಿ. ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಶ್ರೀ ಸುಬ್ರಹ್ಮಣ್ಯ ಭಟ್ ಸಹ ಶಿಕ್ಷಕರು ಸರಕಾರಿ ಪ್ರೌಢಶಾಲೆ ಅರ್ಜಿಬೆಟ್ಟು ಆಗಮಿಸಿದ್ದರು. ಇವರು ದ್ವಿತೀಯ ಸೆಮಿಸ್ಟರ್ ನ ಪ್ರಶಿಕ್ಷಣಾರ್ಥಿಗಳಿಗೆ ಕಲಿಕಾ ಚೇತರಿಕೆ ಎಂಬ ವಿಷಯದ ಬಗ್ಗೆ ಪೂರಕ ಮಾಹಿತಿ […]
ದಿನಾಂಕ 02.11.2022 ರಂದು ಕನ್ನಡದ ಉತ್ಸವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇದರ ಪ್ರಾಂಶುಪಾಲರಾದ ಶ್ರೀ ಸುಬ್ಬಪ್ಪ ಕೈಕಂಬ ಇವರು ಕನ್ನಡ ರಾಜ್ಯ ಹಾಗು ಸಾಹಿತ್ಯ ದ ಬಗ್ಗೆ ಹೇಳಿದರು.ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ ಶೋಭಿತಾ ಸತೀಶ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ,ಕಾರ್ಯಕ್ರಮದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದ,ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು .ಈ ಕಾರ್ಯಕ್ರಮಕ್ಕೆ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ರೆಡ್ ಕ್ರಾಸ್ ಜಂಟಿ ಆಶ್ರಯದಲ್ಲಿ ದಿನಾಂಕ 29-09-2022ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ದಲ್ಲಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು .ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಹಾವೀರ ಆಸ್ಪತ್ರೆಯ ಕನ್ಸಲ್ಟೆಂಟ್ ಫೀಜಿಸಿಯನ್ ಡಾ. ಸುರೇಶ್ ಪುತ್ತೂರಾಯರವರು ಹೃದಯ ಸಂಬಂಧಿ ಖಾಯಿಲೆ ಬಗ್ಗೆ ಮತ್ತು ತಡೆಗಟ್ಟುವ ವಿಧಾನವನ್ನು ತಿಳಿಸಿದರು.ರೆಡ್ ಕ್ರಾಸ್ ಪುತ್ತೂರು ಘಟಕದ ಮುಖ್ಯಸ್ಥರಾದ ಸಂತೋಷ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆರೋಗ್ಯದ ಬಗ್ಗೆ ನಮಗೆ ತಿಳಿದಿರುವ ಮಾಹಿತಿಗಳನ್ನು ಇತರರಿಗೂ ತಿಳಿಸಿಕೊಡುವ […]