ಸೌಹಾರ್ದ ಭೇಟಿ ಕಾರ್ಯಕ್ರಮ

ಸೌಹಾರ್ದ ಭೇಟಿ ಕಾರ್ಯಕ್ರಮ

Friday, February 18th, 2022

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೌಹಾರ್ದ ಭೇಟಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮಾದಿಹಳ್ಳಿ ರಾಮಕೃಷ್ಣ ಮಠದ ಸ್ವಾಮಿ ಬೋಧಸ್ವರೋಪಾನಂದಜಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿವೇಕಾನಂದರ ಜೀವನದ ತತ್ವಗಳು ನಮಗೆಲ್ಲರಿಗೂ ಮಾದರಿಯಾಗಬೇಕು ಎಂದರು. ಮಾದಿಹಳ್ಳಿ ಬದರಿಕಾ ಶ್ರಮ ವಿದ್ಯಾಶಾಲೆಯ ಎಂ. ಶ್ರೀನಿವಾಸ್ ಪ್ರಿನ್ಸಿಪಾಲ್ ಮತ್ತು ಶಿಕ್ಷಣ ಸಂಯೋಜಕ ಮೋಹನ್ ರಾಮ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರು ಡಾ. ಶೋಭಿತಾ ಸತೀಶ್ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿಗಳಾದ ರಕ್ಷಾ ವಂದಿಸಿದರು. ವೃದ್ಧಿ ಕಾರ್ಯಕ್ರಮವನ್ನು ನಿರೂಪಿಸಿದರು.

ಗಣರಾಜ್ಯ ದಿನಾಚರಣೆ

ಗಣರಾಜ್ಯ ದಿನಾಚರಣೆ

Wednesday, January 26th, 2022

26-1-2022 ರಂದು ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಸೈನಿಕ ಮೇಜರ್ ಸುಬೇದಾರ್ ಚಂದ್ರಶೇಖರ್ ಅವರು ಧ್ವಜಾರೋಹಣಗೈದರು.ಕಾರ್ಯಕ್ರಮದ ವಿಶೇಷತೆಯ ಕುರಿತು ಶ್ರೀಮತಿ ಗಂಗಮ್ಮ ಎಚ್ ಶಾಸ್ತ್ರಿ ಸಂಚಾಲಕರು ವಿವೇಕಾನಂದ ಬಿಎಡ್ ಕಾಲೇಜ್ ಮಾತನಾಡಿದರು. ಕಾರ್ಯಕ್ರಮದಲ್ಲಿ 4 ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಸಂಚಾಲಕರು ಸದಸ್ಯರು ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಬಿಎಡ್ ವಿದ್ಯಾರ್ಥಿ ಶಿಕ್ಷಕರು ಉಪಸ್ಥಿತರಿದ್ದರು.

ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Tuesday, January 25th, 2022

ದಿನಾಂಕ 25.01. 2022 ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ಸಹ ಪ್ರಾಧ್ಯಾಪಕರಾದ ಶ್ರೀ ರಘುರಾಜ್ ಯು ವಿ ಕಾರ್ಯಕ್ರಮದ ಮಹತ್ವದ ಕುರಿತು ಮಾತನಾಡಿದರು. ಸಹ ಪ್ರಾಧ್ಯಾಪಕರಾದ ಶ್ರೀಮತಿ ಭುವನೇಶ್ವರಿ ಎ ಎನ್ ಅಧ್ಯಕ್ಷತೆಯನ್ನು ವಹಿಸಿದ್ದರು.  

ವಿವೇಕಾನಂದ ಜಯಂತಿ

ವಿವೇಕಾನಂದ ಜಯಂತಿ

Friday, January 14th, 2022

ವಿವೇಕಾನಂದರ ಆದರ್ಶಗಳು ಎಲ್ಲರಿಗೂ ಸ್ಫೂರ್ತಿಯಾಗಬೇಕು. ಪರಿವರ್ತನೆ ಎಂಬುದು ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಬರಬೇಕು ಆಗ ಮಾತ್ರವೇ ಪರಿವರ್ತನೆಯಾಗಲು ಸಾಧ್ಯ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ಇಲ್ಲಿನ ಔಷಧ ತಜ್ಞರಾದ ಸುರೇಶ್ ಪರ್ಕಳ ಹೇಳಿದರು. ಇವರು ವಿವೇಕಾನಂದ ಬಿಎಡ್ ಕಾಲೇಜ್­ನಲ್ಲಿ ಬುಧವಾರ ನಡೆದ ವಿವೇಕಾನಂದ ಜಯಂತಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಮ್ಮ ಸೈನಿಕರ ಸೇವೆ ನಮಗೆ ಆದರ್ಶವಾಗಬೇಕು ಅವರೇ ನಮ್ಮ ದೇಶದ ನಿಜವಾದ ಹೀರೋಗಳು. ಪ್ರತಿಯೊಂದು ಯುವಜನತೆಯಲ್ಲಿಯೂ ದೇಶಪ್ರೇಮದ ಚಿಲುಮೆ ಉಕ್ಕಬೇಕು ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ […]

ಸಾವಿತ್ರಿಬಾಯಿ ಫುಲೆ ಅಕ್ಷರಮಾಲೆಯ ಕುರಿತಾದ ಅರಿವು

ಸಾವಿತ್ರಿಬಾಯಿ ಫುಲೆ ಅಕ್ಷರಮಾಲೆಯ ಕುರಿತಾದ ಅರಿವು

Monday, January 10th, 2022

ಪುತ್ತೂರು : ದಿನಾಂಕ 7/01/2022 ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾವಿತ್ರಿಬಾಯಿ ಫುಲೆ ಅಕ್ಷರಮಾಲೆಯ ಕುರಿತಾದ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮಧುರ ಮನಸ್ಸು ಮಕ್ಕಳ ಸೇವಾ ಪ್ರತಿಷ್ಠಾನ ಬೋಳುವಾರ್ ಇದರ ಕಾರ್ಯದರ್ಶಿ, ವೈಶಾಲಿ ಮಧುವನ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ಸಾವಿತ್ರಿಬಾಯಿ ಫುಲೆ ಅವರ ಜೀವನದ ಇಣುಕು ನೋಟವನ್ನು ಪ್ರಸ್ತುತ ಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರು ಡಾ. ಶೋಭಿತಾ ಸತೀಶ್ ವಹಿಸಿದ್ದರು.

ವಿದ್ಯಾರ್ಥಿವೇತನ ಮಾಹಿತಿ ಕಾರ್ಯಕ್ರಮ

ವಿದ್ಯಾರ್ಥಿವೇತನ ಮಾಹಿತಿ ಕಾರ್ಯಕ್ರಮ

Tuesday, January 4th, 2022

ಪುತ್ತೂರು : ದಿನಾಂಕ 4/1/2022 ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿವೇತನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ, ನಾರಾಯಣ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಹಲವಾರು ಮಾಹಿತಿಗಳನ್ನು ನೀಡಿದರು. ಈ ರೀತಿಯ ವೇತನ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪಡೆಯಲು ಹಲವಾರು ರೀತಿಯಲ್ಲಿ ಸಹಾಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ಸಂಸ್ಥೆಯ ಸಹ ಪ್ರಾಧ್ಯಾಪಕಿ ಶ್ರೀಮತಿ ಕೃಷ್ಣವೇಣಿ ನಿರ್ವಹಿಸಿದರು.

ಸಂವಿಧಾನವನ್ನು ಗೌರವಿಸಬೇಕು : ಶ್ರೀ ಶ್ಯಾಮ್ ಪ್ರಸಾದ್

ಸಂವಿಧಾನವನ್ನು ಗೌರವಿಸಬೇಕು : ಶ್ರೀ ಶ್ಯಾಮ್ ಪ್ರಸಾದ್

Friday, November 26th, 2021

ಪುತ್ತೂರು : ದಿನಾಂಕ 26/11/21 ರಂದು ವಿವೇಕಾನಂದ ಬಿ. ಎಡ್.‌ ಕಾಲೇಜಿನಲ್ಲಿ ಭಾರತದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ನ್ಯಾಯವಾದಿ ಶ್ರೀ ಶ್ಯಾಮ ಪ್ರಸಾದ್ ಕೈಲಾರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಸಂವಿಧಾನದ ಹಕ್ಕುಗಳ ಬಗ್ಗೆ ಮಾತ್ರವಲ್ಲದೆ ಸಂವಿಧಾನದಲ್ಲಿರುವ ಕರ್ತವ್ಯಗಳ ಬಗ್ಗೆ ಅರಿವಿರಬೇಕು. ಸಂವಿಧಾನವು ಜನರಿಗೆ ರಕ್ಷಣೆಯನ್ನು ನೀಡುತ್ತದೆ. ಹಾಗೆಯೇ ನಾವು ಸಂವಿಧಾನವನ್ನು ದುರುಪಯೋಗಪಡಿಸಬಾರದು. ತಂತ್ರಜ್ಞಾನವನ್ನು ಬಳಸುವುದರಲ್ಲಿಯೂ ಜಾಗರೂಕರಾಗಿರಬೇಕು ಎಂದು ಹೇಳಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ ಶೋಭಿತಾ ಸತೀಶ್ […]

ಪ್ರಶಿಕ್ಷಣಾರ್ಥಿಗಳು ನಿಂತ ನೀರಾಗದೆ ಹರಿಯುವ ನೀರಾಗಬೇಕು : ಜಯರಾಮ ಕೆದಿಲಾಯ

ಪ್ರಶಿಕ್ಷಣಾರ್ಥಿಗಳು ನಿಂತ ನೀರಾಗದೆ ಹರಿಯುವ ನೀರಾಗಬೇಕು : ಜಯರಾಮ ಕೆದಿಲಾಯ

Tuesday, November 23rd, 2021

ಪುತ್ತೂರು :  13-11-2021  ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಸಲಾದ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾಗಿರುವ ಶ್ರೀಜಯರಾಮ ಕೆದಿಲಾಯರವರು ಭಿತ್ತಿಫಲಕ ಅಭಿಜ್ಞಾದರ್ಪಣ ಉದ್ಘಾಟಿಸಿ ಪ್ರಶಿಕ್ಷಣಾರ್ಥಿಗಳು ನಿರಂತರವಾಗಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹರಿಯುವ ನೀರಾಗಬೇಕೆಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ವಿಜೇತ ಖ್ಯಾತಗಾಯಕ ಶ್ರೀಜಗದೀಶ ಆರ್ಚಾಯಕಾರ್ಯಕ್ರಮ ಉದ್ಘಾಟಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಡಾ ಕೆ.ಎಂ ಕೃಷ್ಣ ಭಟ್‌ ಸಂಸ್ಥೆಯ ಯುಟ್ಯೂಬ್‌ […]

ಬೋಧನೆಯ ದಶಸೂತ್ರಗಳು ವಿಷಯದ ಕುರಿತು ಉಪನ್ಯಾಸ

ಬೋಧನೆಯ ದಶಸೂತ್ರಗಳು ವಿಷಯದ ಕುರಿತು ಉಪನ್ಯಾಸ

Saturday, November 6th, 2021

ಪುತ್ತೂರು : 6-11-2021 ರಂದು ಶ್ರೀರಾಮ ಪದವಿ ಕಾಲೇಜು ಕಲ್ಲಡ್ಕ ಇದರ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್‌ ಇವರು ಬೋಧನೆಯ ದಶಸೂತ್ರಗಳು ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು.

ನಾಡು ನುಡಿ ಉನ್ನತಿಯಲ್ಲಿ ಶಿಕ್ಷಕರ ಪಾತ್ರ

ನಾಡು ನುಡಿ ಉನ್ನತಿಯಲ್ಲಿ ಶಿಕ್ಷಕರ ಪಾತ್ರ

Tuesday, November 2nd, 2021

ಪುತ್ತೂರು: ದಿನಾಂಕ: 2/11/2021 ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿ ಶಿಕ್ಷಕರಿಗಾಗಿ ನಾಡು -ನುಡಿಯ ಉನ್ನತಿಯಲ್ಲಿ ಶಿಕ್ಷಕರ ಪಾತ್ರ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಶೋಭಿತ ಸತೀಶ್ ಉಪಸ್ಥಿರಿದ್ದರು.  ಈ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಸಂಸ್ಥೆಯ ಸಹಪ್ರಾಧ್ಯಾಪಕರುಗಳಾದ ಶೀಮತಿ ರಾಜೀವಿ, ಶ್ರೀಮತಿ ಅನುರಾಧ ಹಾಗೂ ಶ್ರೀ ರಘುರಾಜ್ ಉಬರಡ್ಕ ಉಪಸ್ಥಿತರಿದ್ದರು. ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು.