ಸೌಹಾರ್ದ ಭೇಟಿ ಕಾರ್ಯಕ್ರಮ
Friday, February 18th, 2022ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೌಹಾರ್ದ ಭೇಟಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮಾದಿಹಳ್ಳಿ ರಾಮಕೃಷ್ಣ ಮಠದ ಸ್ವಾಮಿ ಬೋಧಸ್ವರೋಪಾನಂದಜಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿವೇಕಾನಂದರ ಜೀವನದ ತತ್ವಗಳು ನಮಗೆಲ್ಲರಿಗೂ ಮಾದರಿಯಾಗಬೇಕು ಎಂದರು. ಮಾದಿಹಳ್ಳಿ ಬದರಿಕಾ ಶ್ರಮ ವಿದ್ಯಾಶಾಲೆಯ ಎಂ. ಶ್ರೀನಿವಾಸ್ ಪ್ರಿನ್ಸಿಪಾಲ್ ಮತ್ತು ಶಿಕ್ಷಣ ಸಂಯೋಜಕ ಮೋಹನ್ ರಾಮ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರು ಡಾ. ಶೋಭಿತಾ ಸತೀಶ್ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿಗಳಾದ ರಕ್ಷಾ ವಂದಿಸಿದರು. ವೃದ್ಧಿ ಕಾರ್ಯಕ್ರಮವನ್ನು ನಿರೂಪಿಸಿದರು.











