ಸ್ವಾತ್ರಂತ್ರ್ಯದ ಅಮೃತನಡಿಗೆ
Friday, August 12th, 202212-08-2022 ರಂದು ಸ್ವಾತ್ರಂತ್ರ್ಯದ ಅಮೃತನಡಿಗೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತ ನಡೆಯಿತು.
12-08-2022 ರಂದು ಸ್ವಾತ್ರಂತ್ರ್ಯದ ಅಮೃತನಡಿಗೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತ ನಡೆಯಿತು.
ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಪ್ರಜ್ಞೆ ಮೂಡಬೇಕಾದರೆ ಮೊದಲು ನಾವೆಲ್ಲರೂ ಒಂದೇ ಎಂಬ ಭಾವನೆ ಪ್ರತಿಯೊಬ್ಬರ ಮನಸ್ಸಿನಲ್ಲೂ ಇರಬೇಕು. ದೇಶಪ್ರೇಮ ಮೂಡಿಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ ಎಂದು ಖ್ಯಾತ ಯಕ್ಷಗಾನ ಭಾಗವತರು ಸತೀಶ್ ಶೆಟ್ಟಿ ಪಟ್ಲ ನುಡಿದರು. ದಿನಾಂಕ 22.07.2022 ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ತೆಂಕಿಲ ಪುತ್ತೂರು, ದ. ಕ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕ ಮತ್ತು ರೇಡಿಯೋ ಪಾಂಚಜನ್ಯ 90.8FM ನೆಹರೂ, ನಗರ ಪ್ರಸ್ತುತಪಡಿಸುವ ತಾಲೂಕು ಮಟ್ಟದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮವು […]
ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ, ಸಂಸ್ಕಾರ ಬೆಳೆಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಉತ್ತಮ ಪ್ರಜೆಯೂ ಒಳ್ಳೆಯ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ರೂಪಲೇಖ ಪಾಣಾಜೆ ಹೇಳಿದರು. ದಿನಾಂಕ 22.07.2022 ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ತೆಂಕಿಲ ಪುತ್ತೂರು, ದ. ಕ. ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕ ಮತ್ತು ರೇಡಿಯೋ ಪಾಂಚಜನ್ಯ 90.8FM ನೆಹರೂ, ನಗರ ಪ್ರಸ್ತುತಪಡಿಸುವ ತಾಲೂಕು ಮಟ್ಟದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮವು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ 16.07.2022 ರಂದು ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರು ಡಾ. ಶೋಭಿತಾ ಸತೀಶ್ ಮಾತನಾಡಿ, ಶಿಕ್ಷಕರಿಗೆ ಪ್ರಥಮ ಚಿಕಿತ್ಸೆ ಮಾಡುವ ವಿಧಾನ ತಿಳಿದಿರಬೇಕು ಮತ್ತು ಅದರ ಅರಿವಿರಬೇಕು ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕಿ ಅನುರಾಧ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಚಿತ್ರಾಕ್ಷಿ ಸ್ವಾಗತಿಸಿ, ಅಶ್ವಿನಿ ಕೆ ವಂದಿಸಿದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 15-07-2022 ರಂದು ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಶಿಕ್ಷಕರಾದ ನಾರಾಯಣ ನಾಯಕ್ ಇವರು ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ನೀಡಿದರು ಮತ್ತು ಅವರ ಶಿಕ್ಷಕ ವೃತ್ತಿಯ ಅನುಭವವನ್ನು ಹಂಚಿಕೊಂಡರು. ಕಾಲೇಜಿನ ಸಹಪ್ರಧ್ಯಾಪಕರಾದ ಶ್ರೀ ಮುರಳಿಕೃಷ್ಣ ಕೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೆ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಶ್ರೀವಿದ್ಯಾ ಸ್ವಾಗತಿಸಿ, ಬಾಲಕೃಷ್ಣ ವಂದಿಸಿದರು.ಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 13-07-2022 ರಂದು ಗುರುಪೂರ್ಣಿಮಾ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ನಳಿನಿ ವಾಗ್ಲೆ ಇವರು ಶಿಕ್ಷಕ ವೃತ್ತಿಯು ಶ್ರೇಷ್ಠವಾದ ವೃತ್ತಿ ,ಹಾಗೆಯೇ ಶಿಕ್ಷಕರಿಗೆ ಇರಬೇಕಾದ ಗುಣಗಳನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ತ್ರಿವೇಣಿಯವರು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿ ನಳಿನಿ ವಾಗ್ಲೆಯವರನು ಸನ್ಮಾನಿಸಲಾಯಿತು. ಬೋಧಕ ವರ್ಗ ಹಾಗು ಬೋಧಕೇತರ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 29/06/2022 ರಂದು ವೀರ ಸಾವರ್ಕರ್ ಸಂಸ್ಮರಣಾ ದಿನಾಚರಣೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ, ಬಂಟ್ವಾಳದ ವಕೀಲ ಶ್ರೀ ಪ್ರಸಾದ್ ವೀರ ಸಾವರ್ಕರ್ ರವರ ಜೀವನ ಮತ್ತು ಸ್ವಾತಂತ್ರಕ್ಕಾಗಿ ಮಾಡಿದ ತ್ಯಾಗದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು ಸುಧಾಕರ್ ರೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಅನ್ನಪೂರ್ಣ ಸ್ವಾಗತಿಸಿ, ಪವನ್ ವಂದಿಸಿದರು. ದುಗ್ಗಮ್ಮ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 21/06/2022 ರಂದು ಯೋಗ ದಿನದ ಅಂಗವಾಗಿ ಶ್ರೀಮತಿ ಶರಾವತಿಯವರ ನೇತೃತ್ವದಲ್ಲಿ ಪ್ರಶಿಕ್ಷಣಾರ್ಥಿಗಳು ಯೋಗಾಸನಗಳನ್ನು ಮಾಡಿಸಿದರು. ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 18/06/2022 ರಂದು ಭಗವದ್ಗೀತೆ ಮತ್ತು ಜ್ಞಾನ ಮನೋವಿಜ್ಞಾನ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸುಬ್ರಾಯ ನಂದೋಡಿ ಜ್ಞಾನ ಮತ್ತು ಮನೋ ವಿಜ್ಞಾನದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರು ಡಾ. ಶೋಭಿತಾ ಸತೀಶ್ ಸ್ವಾಗತಿಸಿ, ಪ್ರಾಧ್ಯಾಪಕಿ ಭುವನೇಶ್ವರಿ ವಂದಿಸಿದರು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ರಕ್ಷಿತ ಕಾರ್ಯಕ್ರಮವನ್ನು ನಿರೂಪಿಸಿದರು.
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 17/06/2022 ರಂದು ಒತ್ತಡದ ಅರಿವು ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಾ. ಸುಲೇಖ ವಾರಧರಾಜ್ ಆಗಮಿಸಿ, ಒತ್ತಡದಿಂದ ಆಗುವ ಪರಿಣಾಮ ಮತ್ತು ಒತ್ತಡವನ್ನು ಕಡಿಮೆ ಮಾಡುವ ಮಾರ್ಗವನ್ನು ತಿಳಿಸಿಕೊಟ್ಟರು. ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ಅನುರಾಧಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾಲೇಜಿನ ಪ್ರಾಧ್ಯಾಪಕಿ ರಾಜೀವಿ. ಬಿ ಸ್ವಾಗತಿಸಿ, ಉಪನ್ಯಾಸಕ ಮುರಳಿ ಕೃಷ್ಣ ಕಾರ್ಯಕ್ರಮವನ್ನು ವಂದಿಸಿದರು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು.