ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ದೀಪಾವಳಿ ಆಚರಣೆ ಕಾರ್ಯಕ್ರಮವನ್ನು ದಿನಾಂಕ 16.11.2023ನೇ ಗುರುವಾರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಶಿಕ್ಷಕರು ಹಾಗೂ ತಾಳಮದ್ದಳೆ ಅರ್ಥದಾರಿಗಳೂ ಆಗಿರುವ ಶ್ರೀ ಭಾಸ್ಕರ ಶೆಟ್ಟಿ ಮಾತನಾಡಿ, ಹಬ್ಬಗಳು ಜನರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ಬೋಧಿಸಲು ಹಾಗೂ ಕಷ್ಟಗಳನ್ನು ಅನುಭವಿಸಿದ ಜನರಿಗೆ ಮನೋರಂಜನೆಯನ್ನು ನೀಡುವ ಉದ್ದೇಶದಿಂದ ಹುಟ್ಟಿಕೊಂಡಿವೆ. ಅಂತೆಯೇ ದೀಪಾವಳಿ ಹಬ್ಬದ ಆಚರಣೆಯು ಪುರಾಣ ಕಥೆಗಳೊಂದಿಗೆ ತಳುಕು ಹಾಕಿಕೊಂಡಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 21.10.2023 ರಂದು ಮಹಿಳಾ ಸಬಲೀಕರಣ ಘಟಕದಿಂದ ‘ಬೆಳವಣಿಗೆಯ ಹಾದಿಯಲ್ಲಿ ಮಹಿಳೆ’ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕು. ಮಲ್ಲಿಕಾ ಕುಕ್ಕಾಡಿಯವರು ಮಹಿಳೆಯರು ಎದುರಿಸುತಿದ್ದ ಸಮಸ್ಯೆಗಳು ಹಾಗೂ ಮಾನವನಿಗೆ ತಾಳ್ಮೆ, ವಿವೇಕ ಎಷ್ಟು ಅವಶ್ಯಕ ಎಂಬುವುದನ್ನು ತಿಳಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಮಹಿಳಾ ಸಬಲೀಕರಣ ಘಟಕದ ಸಂಯೋಜಕಿಯಾಗಿರುವ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಅನುರಾಧ ಪ್ರಸ್ತಾವಿಕ ಮಾತುಗಳ ಮೂಲಕ ಅಭ್ಯಾಗತರನ್ನು ಪರಿಚಯಿಸಿದರು.
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ದಿನಾಂಕ 02-11-2023 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಭುವನೇಶ್ವರಿ ಇವರು ಕನ್ನಡ ಭಾಷೆ – ಕನ್ನಡ ನಾಡಿನ ವೈಭವ ಹಾಗೂ ಕರ್ನಾಟಕ ಏಕೀಕರಣದ ಕುರಿತು ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಅನುರಾಧ ಇವರು ಕನ್ನಡ ರಾಜ್ಯೋತ್ಸವದ ಆಚರಣೆಯ ಮಹತ್ವದ ಕುರಿತು ಅಧ್ಯಕ್ಷೀಯ ನುಡಿಗಳನ್ನಾಡಿದರು. ನಂತರ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಂದ ಕನ್ನಡದ ಮಹತ್ವದ ಬಗೆಗಿನ ಹಾಡು, ಭಾಷಣ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 06-10-2023 ರಂದು ಮಂಗಳೂರು ವಿಶ್ವವಿದ್ಯಾನಿಲಯ, ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ ) ಹಾಗೂ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ತೆಂಕಿಲ, ಪುತ್ತೂರು ಇದರ ಆಶ್ರಯದಲ್ಲಿ “Group Learning Strategies in View of NCF -2023” ಎಂಬ ವಿಷಯದ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಿತು. ಈ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀಯುತ ಡಾ. ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ರಾಷ್ಟ್ರೀಯತೆಯ ಭಾವವನ್ನು ಬೆಳೆಸುವ […]
ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.)ದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್, ತೆಂಕಿಲ, ಪುತ್ತೂರು ಇಲ್ಲಿ ದಿನಾಂಕ 30.09.2023ನೇ ಶನಿವಾರದಂದು ಪ್ರಧಾನಮಂತ್ರಿ ‘ಸ್ವಚ್ಛ ಭಾರತ’ ಅಭಿಯಾನದಡಿಯಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಮತ್ತು ಸಂಸ್ಥೆಯ ಆವರಣ ಹಾಗೂ ಕೊಠಡಿಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಲೇಜಿನ ಸಂಚಾಲಕರಾದ ಶ್ರೀಮತಿ ಗಂಗಮ್ಮ ಎಚ್. ಶಾಸ್ತ್ರಿ, ಸ್ವಚ್ಛತೆ ಮತ್ತು ಪರಿಸರದ ಮಹತ್ವದ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ಸ್ವಚ್ಛತಾ […]
ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್, ರೇಡಿಯೋ ಪಾಂಚಜನ್ಯ 90.8FM ಹಾಗೂ ವಿದ್ಯಾಭಾರತಿ ಉಚ್ಛ ಶಿಕ್ಷಾ ಸಂಸ್ಥಾನ, ಕರ್ನಾಟಕ ಒಟ್ಟಾಗಿ ಆಯೋಜಿಸಿರುವ ‘ಭಾರತೀಯ ಜ್ಞಾನ ಪರಂಪರೆ’ ಕುರಿತ ಉಪನ್ಯಾಸ ಮಾಲಿಕೆಯ ಉದ್ಘಾಟನೆ 08/09/2023 ರಂದು ರೇಡಿಯೋ ಪಾಂಚಜನ್ಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀಯುತ ಡಾ. ಕೆ. ಎಂ. ಕೃಷ್ಣ ಭಟ್ ಭಾರತೀಯರ ಕೊಡುಗೆಗಳು ಹಾಗೂ ಶಿಕ್ಷಣದ ಬಗ್ಗೆ ತಿಳಿಸಿದರು. ಈ ಮಾಲಿಕೆಯ ಮೊದಲನೇ ಉಪನ್ಯಾಸವನ್ನು ಅಂಬಿಕಾ ಮಹಾವಿದ್ಯಾಲಯ, ಪುತ್ತೂರು ಇಲ್ಲಿನ ತತ್ವಶಾಸ್ತ್ರ […]
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ನರೇಂದ್ರ ಪಿ. ಯು. ಕಾಲೇಜು ಹಾಗೂ ವಿವೇಕಾನಂದ ಬಿ. ಎಡ್. ಕಾಲೇಜು ಒಟ್ಟಾಗಿ ದಿನಾಂಕ 15/08/2023 ರಂದು 77ನೇ ಸ್ವಾತಂತ್ರೋತ್ಸವವನ್ನು ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿ ವಂದನೆ ಸ್ವೀಕರಿಸಿದ ಭಾರತೀಯ ಸೇನೆಯ ನಿವೃತ್ತ ಯೋಧರಾದ ಶ್ರೀ ಮೋಹನದಾಸ್ ಇವರು ಸೇನೆಯಲ್ಲಿನ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದರು. ಅಧ್ಯಕ್ಷತೆಯನ್ನು ನರೇಂದ್ರ ಪಿ. ಯು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 02-08-2023 ನೇ ಬುಧವಾರದಂದು “ಆಟಿಡೊಂಜಿ ದಿನ” ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾದ ಶ್ರೀಮತಿ ರಾಜೀವಿ ಬಿ. ಉಪಸ್ಥಿತರಿದ್ದರು. ಇವರು ಆಟಿ ತಿಂಗಳಿನ ಮಹತ್ವವನ್ನು ಗಾದೆಗಳ ಮೂಲಕ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾದ ಶ್ರೀಮತಿ ಅನುರಾಧ ಇವರು ಆಟಿ ತಿಂಗಳಿನಲ್ಲಿ ಆಡುವ ಕೆಲವು ಆಟಗಳ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಡಾ. ಶೋಭಿತಾ ಸತೀಶ್ ಇವರು ಕಾರ್ಯಕ್ರಮವನ್ನುದ್ದೇಶಿಸಿ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 13.07.2023ರಂದು ‘ಶಿಕ್ಷಣ ಮತ್ತು ಕಲಾತ್ಮಕ ದೃಷ್ಟಿ’ ಎಂಬ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಚಲನಚಿತ್ರ ನಟ ಹಾಗೂ ರಂಗಭೂಮಿ ಕಲಾವಿದರಾದ ಶ್ರೀ ಚೇತನ್ ರೈ ಮಾಣಿ ಇವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಕೃಷ್ಣ ನಾಯ್ಕ್ ಶುಭ ಹಾರೈಸಿದರು. ಈ ಕಾರ್ಯಕ್ರಮಕ್ಕೆ ಸಹಾಯಕ ಪ್ರಾಧ್ಯಾಪಕಿಯರಾದ ಶ್ರೀಮತಿ ರಾಜೀವಿ ಸ್ವಾಗತಿಸಿ, […]