ರಾಷ್ಟ್ರೋತ್ಥಾನ ಪರಿಷತ್ತು ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪ್ರಶಸ್ತಿ

Saturday, April 5th, 2025

ರಾಷ್ಟ್ರೋತ್ಥಾನ ಪರಿಷತ್ತು, ಬೆಂಗಳೂರು ಅಕ್ಟೋಬರ್ 19 ಮತ್ತು 20, 2024ರಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಥಣಿಸಂದ್ರ, ಬೆಂಗಳೂರು ಇಲ್ಲಿ ನಡೆಸಿದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಯಾದ ಕೀರ್ತನ್ ದ್ವಿತೀಯ ಸ್ಥಾನ ಹಾಗೂ ಇಂಗ್ಲೀಷ್ ವಿಭಾಗದಲ್ಲಿ ಅಕ್ಷಯ್ ನವೀನ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ರತನ್ ಟಾಟಾ ಸಂಸ್ಮರಣೆ ಮತ್ತು ವಾಲ್ಮೀಕಿ ಜಯಂತಿ  ಕಾರ್ಯಕ್ರಮ

ರತನ್ ಟಾಟಾ ಸಂಸ್ಮರಣೆ ಮತ್ತು ವಾಲ್ಮೀಕಿ ಜಯಂತಿ  ಕಾರ್ಯಕ್ರಮ

Saturday, April 5th, 2025

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ರತನ್ ಟಾಟಾ ಸಂಸ್ಮರಣೆ ಮತ್ತು ವಾಲ್ಮೀಕಿ ಜಯಂತಿ  ಕಾರ್ಯಕ್ರಮವು 15-10-2024ರಂದು ನಡೆಯಿತು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಅಕ್ಷಯ್, ರತನ್ ಟಾಟಾರವರ ಜೀವನ ಹಾಗೂ ಸಾಧನೆಗಳನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್, ರತನ್ ಟಾಟಾ ಅವರ ಸಾಧನೆಯು ಅತ್ಯುನ್ನತವಾದುದು. ಅವರ ಅಗಲಿಕೆಯ ನಂತರವೂ ಜನರಲ್ಲಿ ನೆನಪಾಗಿ ಉಳಿಯುವಂತೆ ಸಾಧನೆ ಮಾಡಿದ ವ್ಯಕ್ತಿತ್ವ ಅವರದ್ದು ಎಂದರು. ನಂತರ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಕೀರ್ತನ್ ಶೆಟ್ಟಿ ಮಾತನಾಡಿ, ವಾಲ್ಮೀಕಿಯು […]

ಶಾರದಾ ಪೂಜೆ ಆಚರಣೆ

ಶಾರದಾ ಪೂಜೆ ಆಚರಣೆ

Saturday, April 5th, 2025

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಾರದಾ ಪೂಜೆಯನ್ನು ಅಕ್ಟೋಬರ್ 10, 2024ರಂದು ಆಚರಿಸಲಾಯಿತು.                        ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಪ್ರಸನ್ನ ಭಟ್, ಶ್ರೀ ರಮೇಶ್ ನಾಯ್ಕ್, ಪ್ರಾoಶುಪಾಲರು, ಬೋಧಕ – ಬೋಧಕೇತರ ವೃಂದ ಹಾಗೂ  ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದು, ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಪ್ರಶಿಕ್ಷಣಾರ್ಥಿಗಳಿಂದ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಬೀದಿ ನಾಟಕ ಪ್ರದರ್ಶನ

ಪ್ರಶಿಕ್ಷಣಾರ್ಥಿಗಳಿಂದ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಬೀದಿ ನಾಟಕ ಪ್ರದರ್ಶನ

Saturday, April 5th, 2025

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ‘ವಿನಾಶದ ಮೂಲ’  ಎಂಬ ಬೀದಿ ನಾಟಕ ನೆಹರು ನಗರದ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 4-10-2024 ರಂದು ಪ್ರದರ್ಶನಗೊಂಡಿತು. ಮನುಷ್ಯನು ಪ್ರಕೃತಿಯನ್ನು ನಾಶ ಮಾಡಿ ವಿನಾಶದತ್ತ ಕೊಂಡೊಯ್ಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳು ನಶಿಸುತ್ತಿವೆ ಹಾಗೂ ಹಲವಾರು ಅನಾರೋಗ್ಯಗಳಿಗೆ ತುತ್ತಾಗುತ್ತಿದ್ದಾನೆ. ಇವೆಲ್ಲವನ್ನೂ ಹೇಗೆ ತಡೆಗಟ್ಟಬಹುದು ಎಂಬುದನ್ನು ಈ ಬೀದಿನಾಟಕದ ಮೂಲಕ ಪ್ರಸ್ತುತಪಡಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ|ಶೋಭಿತ ಸತೀಶ್, ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಅಕ್ಷತಾ ಎಂ , ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ […]

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Saturday, April 5th, 2025

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಮಹಾತ್ಮ ಗಾಂಧಿಯವರ ಆದರ್ಶಗಳನ್ನು  ಪ್ರೇರಣೆ ಮಾಡಿಕೊಂಡು, ವಿದ್ಯಾರ್ಥಿಗಳಲ್ಲಿ ಶುದ್ಧತೆ ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವನ್ನು ಮೂಡಿಸುವ ಉದ್ದೇಶದಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.        ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳು ಐದು ತಂಡಗಳ ಮೂಲಕ ಕಾಲೇಜಿನ ಕೊಠಡಿಗಳು ಹಾಗೂ ಅವರಣವನ್ನು ಸ್ವಚ್ಛಗೊಳಿಸಿದರು.

ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Saturday, April 5th, 2025

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಿವೃತ್ತ ಶಿಕ್ಷಕರಾದ ಶ್ರೀ ನಾರಾಯಣ ನಾಯ್ಕ್ ಅವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿಯನ್ನು (25-09-2024) ಬುಧವಾರದಂದು ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅವರು, ಬಿ. ಎಡ್. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮತ್ತು ಖಾಸಗಿ ಸಂಸ್ಥೆಗಳಿಂದ ಸಿಗುವ ವಿದ್ಯಾರ್ಥಿ ವೇತನಗಳ ಬಗ್ಗೆ ತಿಳಿಸಿದರು. ವಿವಿಧ ವರ್ಗದವರಿಗೆ ನೀಡುವ ವಿದ್ಯಾರ್ಥಿ ವೇತನಗಳು ಹಾಗೂ ವಿದ್ಯಾರ್ಥಿಗಳು ಈ ವೇತನಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಮತ್ತು ಇತರರಿಗೆ ಸಹ ಮಾಹಿತಿ ನೀಡಲು ಪ್ರೇರೇಪಿಸಿದರು.

"ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್"- ಉಪನ್ಯಾಸ ಕಾರ್ಯಕ್ರಮ

“ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್”- ಉಪನ್ಯಾಸ ಕಾರ್ಯಕ್ರಮ

Saturday, April 5th, 2025

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಜಂಟಿಯಾಗಿ ಆಯೋಜಿಸಿದ “ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್” ವಿಷಯಕ್ಕೆ ಸಂಬಂಧಿಸಿದಂತೆ ಉಪನ್ಯಾಸ ಕಾರ್ಯಕ್ರಮವು 24-09-2024 ದಂದು ನಡೆಯಿತು. ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಮಹಿಳೆಯರಲ್ಲಿ ಬಹಳ ಹೆಚ್ಚಾಗಿ ಕಂಡು ಬರುತ್ತಿದೆ. ಇದು ಕೇವಲ ಮಹಿಳೆಯರಲ್ಲಿ ಮಾತ್ರವಲ್ಲದೆ  ಪುರುಷರಲ್ಲೂ ಕಂಡು ಬರುತ್ತದೆ. ಇದನ್ನು ತಡೆಗಟ್ಟಲು ಆಗಾಗ ಪರೀಕ್ಷೆಗಳನ್ನು ಮಾಡಿಕೊಳ್ಳುತ್ತಿರಬೇಕು. ಸ್ತನ ಕ್ಯಾನ್ಸರ್ ಹೆಚ್ಚಾಗಿ ಮಕ್ಕಳಾಗದೇ ಇರುವವರಲ್ಲಿ, ಮಕ್ಕಳಿಗೆ ಹಾಲುಣಿಸದೆ ಇರುವವರಿಗೆ, 35 ವರ್ಷದ ಒಳಗೆ ಮಗು ಆಗದೇ […]

ಕೌನ್ಸಿಲಿಂಗ್ ಸರ್ಟಿಫಿಕೇಟ್ ಕೋರ್ಸ್

ಕೌನ್ಸಿಲಿಂಗ್ ಸರ್ಟಿಫಿಕೇಟ್ ಕೋರ್ಸ್

Tuesday, September 24th, 2024

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಮತ್ತು ಆಪ್ತ ಸಲಹಾ ಕೇಂದ್ರ ಬೆಂಗಳೂರು ಇದರ ಸಂಯೋಜನೆಯಲ್ಲಿ ಕೌನ್ಸಿಲಿಂಗ್ ಸರ್ಟಿಫಿಕೇಟ್ ಕೋರ್ಸ್ ಕಾರ್ಯಕ್ರಮವು ದಿನಾಂಕ: 20-09-2024 ಮತ್ತು 21-09-2024 ರಂದು ನಡೆಯಿತು. ಏಕಾಗ್ರತೆ ಮತ್ತು ಆಸಕ್ತಿ ಮನುಷ್ಯನಲ್ಲಿ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಕೌನ್ಸಿಲಿಂಗ್ ನ ವಿಧಾನ, ಅದರ ಅಗತ್ಯತೆ, ಉದ್ದೇಶಗಳೇನು ಎಂಬುದನ್ನು ಪ್ರತಿಯೊಬ್ಬ ಶಿಕ್ಷಕರು ತಿಳಿದುಕೊಳ್ಳಬೇಕು. ಪೀರ್ ಕೌನ್ಸಿಲಿಂಗ್ ನಲ್ಲಿ ಶಿಕ್ಷಕನು ತನ್ನ ವಿದ್ಯಾರ್ಥಿಗಳ ಮನಸ್ಸನ್ನು ಅರಿತುಕೊಳ್ಳುವ ಪ್ರಯತ್ನ ಮಾಡಬೇಕು. ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು, ವಿದ್ಯಾರ್ಥಿಗಳ ಭವಿಷ್ಯದ ಜೀವನದ ಬಗ್ಗೆಯೂ […]

ಯೋಗ ಸರ್ಟಿಫಿಕೇಟ್ ಕೋರ್ಸ್

Tuesday, September 10th, 2024

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ, ಪುತ್ತೂರು ಹಾಗೂ ಆರ್ಟ್ ಆಫ್ ಲಿವಿಂಗ್, ಪುತ್ತೂರು ಜಂಟಿಯಾಗಿ ಆಯೋಜಿಸಿದ ‘ಆನಂದೋತ್ಸವ ಶಿಬಿರ – ವಿದ್ಯಾರ್ಥಿ ಶಿಕ್ಷಕ ವಿಶೇಷ’ ಯೋಗ ಸರ್ಟಿಫಿಕೇಟ್‌ ಕೋರ್ಸ್ ವಿವೇಕಾನಂದ ಶಿಕ್ಷಣಮಹಾವಿದ್ಯಾಲಯದಲ್ಲಿ ದಿನಾಂಕ 03/09/2024 ಮಂಗಳವಾರದಂದು ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ಉದ್ಘಾಟಿಸಿದ ನರೇಂದ್ರ ಪದವಿ ಪೂರ್ವ ಕಾಲೇಜು, ಪುತ್ತೂರು ಇಲ್ಲಿನ ಪ್ರಾಂಶುಪಾಲರಾದ ಶ್ರೀ ಪ್ರಸಾದ್ ಶ್ಯಾನ್ ಭೋಗ್,ಯೋಗದ ಪ್ರಾಮುಖ್ಯತೆ ಬಗ್ಗೆ ಶಿಬಿರಾರ್ಥಿಗಳಿಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಯೋಗ ಶಿಕ್ಷಕಿ, ಶ್ರೀಮತಿ ಶರಾವತಿ ರವಿನಾರಾಯಣ, ಶಿಕ್ಷಕರಲ್ಲಿ […]

78ನೇ ಸ್ವಾತಂತ್ರ್ಯ ದಿನಾಚರಣೆ

78ನೇ ಸ್ವಾತಂತ್ರ್ಯ ದಿನಾಚರಣೆ

Tuesday, September 10th, 2024

ವಿವೇಕಾನಂದ ಸಂಸ್ಥೆಗಳ ಆವರಣ ತೆಂಕಿಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್, ನರೇಂದ್ರ ಪ.ಪೂ ಕಾಲೇಜು ಒಟ್ಟಾಗಿ ಸಂಭ್ರಮದಿಂದ ಆಚರಿಸಲಾಯಿತು.